alex Certify ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಪಡಿತರ ನೀಡಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ(ಎಎವೈ) ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 15 ಕೆ.ಜಿ. ಜೋಳ ಮತ್ತು 20 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 2 ಕೆ.ಜಿ ಜೋಳ ಮತ್ತು 3 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ.

ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್ ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15 ರೂ.ಗಳಂತೆ ಏಕ ಸದಸ್ಯರ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎ.ಪಿ.ಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19ರ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಪಡಿತರ ಪಡೆಯುವ ಸಮಯದಲ್ಲಿ ಸೋಪ್/ಸ್ಯಾನಿಟೈಸರ್ ಬಳಸುವುದು ಕಡ್ಡಾಯವಾಗಿರುತ್ತದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಸೀಲ್ದಾರ್ ಕಚೇರಿಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಲ್. ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...