alex Certify Ration Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Ration Card : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ತಿಳಿಸಿದೆ.

ರಾಜ್ಯ ಸರ್ಕಾರವು ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್‌ 1 ರಿಂದ 14ರ ವರೆಗೆ ಅವಕಾಶ ನೀಡಿತ್ತು.  ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಕೊಂಡಿದ್ದು, ಹಲವು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.

ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರ ಕಾರ್ಡುಗಳ ವಿಲೇವಾರಿ ಆದ ನಂತರದಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...