alex Certify ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಅಳವಡಿಕೆಗೆ ಕೇಂದ್ರದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರ ಅಳವಡಿಕೆಗೆ ಕೇಂದ್ರದ ಸೂಚನೆ

ನವದೆಹಲಿ: ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯಗಳನ್ನು ಪಡೆಯುವವರಿಗೆ ಸಂತಸದ ಸುದ್ದಿ ಇಲ್ಲಿದೆ. ನ್ಯಾಯಬೆಲೆ ಅಂಗಡಿ ಮಾಲೀಕರು ಇನ್ನುಮುಂದೆ ಪಡಿತರ ಕಡಿತ ಮಾಡಲು ಸಾಧ್ಯವಾಗುವುದಿಲ್ಲ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವುದನ್ನು ಖಚಿತಪಡಿಸಿಕೊಳ್ಳಲು, ಪಡಿತರ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್(ಇಪಿಒಎಸ್) ಸಾಧನಗಳನ್ನು ಅಳವಡಿಸಲು ಕೇಂದ್ರ ಸೂಚಿಸಿದೆ.

ಎಲೆಕ್ಟ್ರಾನಿಕ್ ಮಾಪಕಗಳೊಂದಿಗೆ ರೇಷನ್ ವಿತರಿಸಲು ಕೇಂದ್ರ ಸರ್ಕಾರ ಆಹಾರದ ಭದ್ರತಾ ಕಾಯ್ದೆ ನಿಯಮಗಳ ತಿದ್ದುಪಡಿ ಮಾಡಲಾಗಿದೆ. ಪಡಿತರ ಅಂಗಡಿಗಳಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಫಲಾನುಭವಿಗಳಿಗೆ ಆಹಾರ ಧಾನ್ಯಗಳನ್ನು ತೂಕ ಮಾಡುವಾಗ ಕಡಿತವನ್ನು ತಡೆಯಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ಅಧಿಕಾರಿಯೊಬ್ಬರ ಪ್ರಕಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಜೂನ್ 18, 2021 ರಂದು ಎನ್‌ಎಫ್‌ಎಸ್‌ಎ 2013 ರ ಅಡಿಯಲ್ಲಿ ಅರ್ಹತೆಯ ಪ್ರಕಾರ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದಲ್ಲಿ ಸಬ್ಸಿಡಿ ಆಹಾರ ಧಾನ್ಯಗಳನ್ನು ವಿತರಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...