alex Certify ಪಡಿತರ ಚೀಟಿದಾರರಿಗೆ ಶಾಕ್: ರಾಜ್ಯಾದ್ಯಂತ ಪಡಿತರ ಆಹಾರ ಧಾನ್ಯ ವಿತರಣೆ ಸ್ಥಗಿತ; ನಾಳೆ ವರ್ತಕರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಶಾಕ್: ರಾಜ್ಯಾದ್ಯಂತ ಪಡಿತರ ಆಹಾರ ಧಾನ್ಯ ವಿತರಣೆ ಸ್ಥಗಿತ; ನಾಳೆ ವರ್ತಕರ ಪ್ರತಿಭಟನೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ವಿತರಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ನವೆಂಬರ್ 7ರಂದು ರಾಜ್ಯಾದ್ಯಂತ ಪಡಿತರ ಆಹಾರ ಧಾನ್ಯ ವಿತರಣೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನವೆಂಬರ್ 7 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು. ಆಹಾರ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮೂರ್ನಾಲ್ಕು ಬಾರಿ ಸಭೆ ನಡೆಸಿ ಪಡಿತರ ವಿತರಕರ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರೂ, ಬೇಡಿಕೆ ಈಡೇರಿಸಿಲ್ಲ. ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಲಾಗಿದೆ.

ಪಡಿತರ ಚೀಟಿದಾರರಿಗೆ ಅಕ್ಕಿಯ ಬದಲು ಹಣ ನೀಡುವುದರಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸಿಗಬೇಕಿದ್ದ ಕಮಿಷನ್ ಸಿಗುತ್ತಿಲ್ಲ. ಹೀಗಾಗಿ ಎಲ್ಲರಿಗೂ 10 ಕೆಜಿ ಅಕ್ಕಿ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...