alex Certify ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ರಾಜ್ಯದ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ಹಲವು ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವಿಸ್ತೃತ ವರದಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ರೇಷನ್ ಅಂಗಡಿ, ಜನರು ಚರ್ಚಿಸಿ ಶುಲ್ಕ ನಿಗದಿಪಡಿಸಿ ಮನೆಬಾಗಿಲಿಗೆ ಪಡಿತರ ಪೂರೈಕೆ ಮಾಡಬೇಕು ಎಂದು ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸಮಿತಿಯಿಂದ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ಮನೆ ಬಾಗಿಲಿಗೆ ಪಡಿತರ ಪೂರೈಕೆಗೆ ಅನುಮತಿ ನೀಡಬೇಕು. ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಪಡಿತರ ಚೀಟಿ ಡೇಟಾಬೇಸ್ ನೊಂದಿಗೆ ಸಂಯೋಜನೆ ಮಾಡಬೇಕು. 800 ಆನ್ಲೈನ್ ಸೇವೆಗಳಿಗೆ ಏಕಗವಾಕ್ಷಿ ಏಜೆನ್ಸಿ ರಚಿಸಬೇಕು. ಬೆಂಗಳೂರು ಒನ್ ಕರ್ನಾಟಕವನ್ನು ಗ್ರಾಪಂ ಸೇವಾ ಕೇಂದ್ರಗಳ ಮೂಲಕ ಸೇವೆಗಳು ಲಭ್ಯವಿರಬೇಕು. ಆರ್.ಟಿ.ಒ. ಕಚೇರಿ ಪೇಪರ್ ಲೆಸ್ ಆಗಬೇಕೆಂಬು ಹೇಳಲಾಗಿದೆ.

ಹೀಗೆ ಕಂದಾಯ, ಆಹಾರ ಮತ್ತು ಸಾರಿಗೆ ಇಲಾಖೆಯ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಆಯೋಗದಿಂದ ಮೊದಲ ವರದಿಯನ್ನು ಸಿಎಂಗೆ ಸಲ್ಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...