alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಬಿಡುಗಡೆ

ಬಳ್ಳಾರಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2021ನೇ ಜುಲೈ ಮಾಹೆಯ ಪಡಿತರ ಈಗಾಗಲೇ ಹಂಚಿಕೆಯಾಗಿದ್ದು, ಅದರಂತೆ ಪಡಿತರ ಚೀಟಿದಾರರು ಪಡಿತರ ಪಡೆದುಕೊಳ್ಳಬೇಕು ಎಂದು ಹರಪನಹಳ್ಳಿ ತಹಸೀಲ್ದಾರ್ ತಿಳಿಸಿದ್ದಾರೆ.

ಫಲಾನುಭವಿಗಳಿಗೆ ಪಡಿತರ ವಿತರಿಸುವ ಪ್ರಮಾಣದ ವಿವರ:

ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ(ಎನ್‍ಎಸ್‍ಎಫ್‍ಐ) ಪ್ರತಿ ಸದಸ್ಯನಿಗೆ 5 ಕೆ.ಜಿ. ಅಕ್ಕಿಯಂತೆ ಪ್ರತಿ ಕಾರ್ಡಿಗೆ 15ಕೆಜಿ ಅಕ್ಕಿ,(ಪಿಎಂಜಿಕೆಎವೈ) 20 ಕೆಜಿ ರಾಗಿ ಉಚಿತವಾಗಿ ಪಡೆಯಬಹುದು. ಆದ್ಯತಾ(ಪಿಎಹೆಚ್/ಬಿಪಿಎಲ್) ಪಡಿತರ ಚೀಟಿಗೆ (ಎನ್‍ಎಸ್‍ಎಫ್‍ಐ) ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ, 3 ಕೆಜಿ ರಾಗಿ, ಪ್ರತಿ ಕಾರ್ಡಿಗೆ 2 ಕೆಜಿ ಗೋಧಿ(ಪಿಎಂಜಿಕೆಎವೈ) ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ಪಡೆಯಬಹುದು. ಎಪಿಎಲ್(ಎನ್‍ಪಿಎಚ್‍ಎಚ್) ಪಡಿತರ ಚೀಟಿ(Willingness)  ಮತ್ತು ಎನ್‍ಆರ್‍ಸಿ ಅರ್ಜಿಗಳಿಗೆ ಪ್ರತಿ ಕೆಜಿ ಗೆ 15 ರೂ.ಗಳಂತೆ ಒಪ್ಪಿಗೆ ನೀಡಿದ ಪಡಿತರ ಚೀಟಿಗಳಿಗೆ ಏಕ ಸದಸ್ಯ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತದೆ.

ಅಂತರರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9 ರವರೆಗೆ ಪಡಿತರ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...