alex Certify ಶಿವಮೊಗ್ಗದ ಘರ್ಷಣೆ ಹಿಂದೆ ದೊಡ್ಡ ಪಿತೂರಿ ಇದೆ: ರವಿಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದ ಘರ್ಷಣೆ ಹಿಂದೆ ದೊಡ್ಡ ಪಿತೂರಿ ಇದೆ: ರವಿಕುಮಾರ್

ಬೆಂಗಳೂರು: ಶಿವಮೊಗ್ಗದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರದಲ್ಲಿ ಘರ್ಷಣೆ ಉಂಟಾಗಿದ್ದು, ಇದರ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫ್ಲೆಕ್ಸ್ ತೆಗೆದವರು ದೇಶದ್ರೋಹಿಗಳು. ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಾವರ್ಕರ್ ಅವರನ್ನು ಅವಮಾನಿಸಿದ್ದಾರೆ. ಬಿಜೆಪಿ ಸುಮ್ಮನಿರುವುದಿಲ್ಲ. ನಮ್ಮವರು ಯಾರೂ ಟಿಪ್ಪುಸುಲ್ತಾನ್ ಬ್ಯಾನರ್ ಹರಿದು ಹಾಕಿಲ್ಲ. ಯಾರೇ ಹರಿದಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಟಿಪ್ಪುಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, ಮತಾಂಧ. ಕಾಂಗ್ರೆಸ್ ನಾಯಕರು ನಿಜವಾದ ಇತಿಹಾಸ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...