alex Certify ಶುಭಸುದ್ದಿ: ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭಸುದ್ದಿ: ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ

ಕಾರವಾರ: ರಾಜ್ಯದಲ್ಲಿ 34 ಸರ್ವೆ ಎಡಿಎಲ್ಆರ್ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 364 ಸರ್ವೆಯರ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಸರ್ವೆಯರ್ ಹುದ್ದೆಗಳ ನೇಮಕಾತಿ ಕೂಡ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

1091 ಲೈಸೆನ್ಸ್ ಸರ್ವೆಯರ್ ಗಳ ನೇಮಕ ಮಾಡಲಾಗಿದೆ. ಗ್ರಾಮ ಆಡಳಿತಾಧಿಕಾರಿ ಹುದ್ದೆ ಖಾಲಿ ಇವೆ. ಒಂದು ಸಾವಿರ ಗ್ರಾಮ ಲೆಕ್ಕಗರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಉಳಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಕ್ರಮ ವಹಿಸಲಾಗಿದೆ. ಈ ಹಿಂದೆ 212 ದಿನಗಳಲ್ಲಿ ವಿಲೇವಾರಿಯಾಗುತ್ತಿದ್ದ ಪ್ರಕರಣಗಳು ಈಗ 76 ದಿನಗಳಲ್ಲಿ ವಿಲೇವಾರಿ ಆಗುತ್ತಿವೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: