alex Certify ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶಾಲೆ ಮುಂದೂಡಿಕೆ, ಸಮವಸ್ತ್ರ ಕಡ್ಡಾಯ ಬೇಡ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶಾಲೆ ಮುಂದೂಡಿಕೆ, ಸಮವಸ್ತ್ರ ಕಡ್ಡಾಯ ಬೇಡ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ

ನವದೆಹಲಿ: ಶಾಲೆ ಆರಂಭ ಮುಂದೂಡಿಕೆ ಬೇಡ ಎಂದು ಹೇಳಿರುವ ಕೇಂದ್ರ ಸರ್ಕಾರ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇಸಿಗೆಯ ಕಾರಣ ಸಮವಸ್ತ್ರಗಳನ್ನು ಕಡ್ಡಾಯ ಮಾಡದಂತೆ ಸಲಹೆ ನೀಡಿದೆ.

ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಜ್ಯಗಳಿಗೆ ಈ ಕುರಿತಾಗಿ ಸಲಹೆ ನೀಡಲಾಗಿದೆ. ದೇಶದ ಅನೇಕ ರಾಜ್ಯಗಳಲ್ಲಿ ಉಷ್ಣ ಮಾರುತದ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕ್ರಮಕೈಗೊಳ್ಳಬೇಕೆಂದು ತಿಳಿಸಲಾಗಿದೆ.

ಬಿಸಿಲಿನ ಅಡ್ಡ ಪರಿಣಾಮದಿಂದ ಮಕ್ಕಳನ್ನು ರಕ್ಷಿಸಲು ಶಾಲಾ ಸಮಯದಲ್ಲಿ ಬದಲಾವಣೆ, ಸಮವಸ್ತ್ರದಲ್ಲಿ ವಿನಾಯಿತಿ ಸೇರಿದಂತೆ ಹಲವು ಮಾರ್ಪಾಡು ಮಾಡಿಕೊಳ್ಳಲು ಸೂಚಿಸಲಾಗಿದೆ.

ಶಾಲೆಗಳನ್ನು ಮುಚ್ಚಬಾರದು, ಸಮಯವನ್ನು ಬದಲಾಯಿಸಬೇಕು. ಬೆಳಗ್ಗೆ 7 ಗಂಟೆಯಿಂದಲೇ ಶಾಲೆ ಶುರು ಮಾಡಿ, ತರಗತಿ ಅವಧಿ ಕಡಿತಗೊಳಿಸಿ ಮಧ್ಯಾಹ್ನದ ಒಳಗೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಸಮವಸ್ತ್ರ ಕಡ್ಡಾಯ ಮಾಡಬಾರದು. ಮಕ್ಕಳಿಗೆ ಅನುಕೂಲವಾಗುವ ಬಟ್ಟೆ ಧರಿಸಲು ಅವಕಾಶ ನೀಡಬೇಕು.

ಕೊಠಡಿಯ ಹೊರಗಿನ ಚಟುವಟಿಕೆ ಕಡಿಮೆ ಮಾಡಬೇಕು ಶಾಲೆಗಳಲ್ಲಿ ಒ.ಆರ್.ಎಸ್. ಮತ್ತು ಗ್ಲೂಕೋಸ್ ಸಂಗ್ರಹಿಸಿಟ್ಟುಕೊಳ್ಳಬೇಕು. ನೀರು ಕುಡಿಯುವಂತೆ ಮಕ್ಕಳಿಗೆ ಅರಿವು ಮೂಡಿಸಬೇಕು. ಚರ್ಮದ ಶೂ ಬದಲು ಕ್ಯಾನ್ವಾಸ್ ಶೂ ಬಳಸಲು ಅವಕಾಶ ನೀಡಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...