alex Certify ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಪಾವತಿ

ದಾವಣಗೆರೆ: ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ ಮೊದಲ ಕಂತಿನಲ್ಲಿ ಗರಿಷ್ಠ 2000 ರೂ. ವರೆಗೆ ಹಾಗೂ ಈಗ, ಬಾಕಿ ಇದ್ದ ರೈತರಿಗೆ ಒಟ್ಟು 60,23,46,380 ರೂ. ಗಳನ್ನು ನೇರವಾಗಿ ರೈತರ ಖಾತೆಗೆ ಪಾವತಿಸಲಾಗಿದೆ.

2023 ರ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ 1,50,621.7 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಸರ್ಕಾರಕ್ಕೆ ವರದಿ ನೀಡಲಾಗಿತ್ತು. SDRF ಹಾಗೂ NDRF  ಮಾರ್ಗಸೂಚಿನ್ವಯ ಅರ್ಹರ ರೈತರಿಗೆ ಗರಿಷ್ಠ 2000 ರೂ. ವರೆಗೆ 82928 ರೈತರಿಗೆ 15,88,15,380 ರೂ.ಗಳನ್ನು ಮೊದಲ ಕಂತಾಗಿ ಪಾವತಿಸಲಾಗಿತ್ತು.

ಮೇ.2 ರ ಸರ್ಕಾರದ ಆದೇಶದಂತೆ ಮಾರ್ಗಸೂಚಿನ್ವಯ ಪರಿಹಾರ ನೀಡಲು ಬಾಕಿ ಇದ್ದ ಮೊತ್ತವನ್ನು ಈಗ ಜಿಲ್ಲೆಯ 69575 ರೈತರಿಗೆ 44,35,31,000 ರೂ. ಗಳನ್ನು ನೇರವಾಗಿ ರೈತರ ಖಾತೆಗೆ ಪಾವತಿ ಮಾಡಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ಇದುವರೆಗೆ ರೂ.60,23,46,381 ಗಳನ್ನು ಬೆಳೆ ಹಾನಿ ಪರಿಹಾರವಾಗಿ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ ಎಂ.ವಿ. ತಿಳಿಸಿದ್ದಾರೆ.

ಯಾವುದೇ ರೈತರಿಗೆ ಬೆಳೆ ಪರಿಹಾರ ಕುರಿತಂತೆ ಮಾಹಿತಿ ಮತ್ತು ಮಾರ್ಗಸೂಚಿ ಬಗ್ಗೆ ವಿವರ ನೀಡಲು ಎಲ್ಲಾ ತಾಲ್ಲೂಕುಗಳಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಮಾಹಿತಿಗಾಗಿ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಕರೆ ಮಾಡಬಹುದಾಗಿದೆ.

ಸಹಾಯವಾಣಿ ಸಂಖ್ಯೆಗಳು: ಚನ್ನಗಿರಿ ತಾ. ಮೊ.ಸಂ:7892481962, ದಾವಣಗೆರೆ, ಮೊ.ಸಂ:9731254380, ಹೊನ್ನಾಳಿ ತಾ. ಮೊ.ಸಂ:9686136015, ಜಗಳೂರು ತಾ. ಮೊ.ಸಂ:8431977870, ನ್ಯಾಮತಿ ತಾ. ಮೊ.ಸಂ:8073951245, ಹರಿಹರ ತಾ.ಮೊ.ಸಂ:8618868370 ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...