alex Certify BIG NEWS: ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ವೀಕೆಂಡ್ ಕರ್ಫ್ಯೂ ನಡುವೆ ಅಂಗನವಾಡಿ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ರೇಣುಕಾಚಾರ್ಯ, ವೀಕೆಂಡ್ ಕರ್ಫ್ಯೂ ನಡುವೆ ಅಂಗನವಾಡಿ ಉದ್ಘಾಟನೆ

ದಾವಣಗೆರೆ: ಮತ್ತೆ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ನಿಯಮ ಉಲ್ಲಂಘಿಸಿ ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬಳ್ಳೇಶ್ವರ ಗ್ರಾಮದಲ್ಲಿ 8 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟಿಸಿದ್ದಾರೆ.

ಮಾದೇನಹಳ್ಳಿ ಗ್ರಾಮದಲ್ಲಿ 11.60 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡಕ್ಕೆ ಭೂಮಿ ಪೂಜೆ, 30 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ಉದ್ಘಾಟಿಸಿ, ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗೆ ಸುರಕ್ಷಾ ಕಿಟ್ ವಿತರಿಸಿದ್ದಾರೆ.

ಸೋಮನಮಲ್ಲಾಪುರ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ, 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ಮುದುವರೆದ ಕಾಮಗಾರಿ ಉದ್ಘಾಟನೆ, 5.90 ಲಕ್ಷ ರೂ. ವೆಚ್ಚದ ಹೈಟೆಕ್ ಶೌಚಾಲಯ ಹಾಗೂ 20 ಲಕ್ಷ ರೂ. ವೆಚ್ಚದ ರಿವೀಟ್ ಮೆಂಟ್ ಕಾಮಗಾರಿ ಉದ್ಘಾಟಿಸಿದ್ದಾರೆ.

ವೀಕೆಂಡ್ ಕರ್ಫ್ಯೂ ನಡುವೆಯೂ ರೇಣುಕಾಚಾರ್ಯ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆನ್ನಲಾಗಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗಿ ತಮ್ಮದೇ ಕಾರ್ಯ ಚಟುವಟಿಕೆಗಳ ಮೂಲಕ ಗಮನಸೆಳೆದಿದ್ದ ರೇಣುಕಾಚಾರ್ಯ ಇತ್ತೀಚೆಗೆ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...