alex Certify ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆ ಕೋರ್ಟ್ ನಲ್ಲಿ ನಟ ದರ್ಶನ್ ಜೈಲು ಭವಿಷ್ಯ ನಿರ್ಧಾರ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಕೊಲೆ ಕೇಸ್ : ನಾಳೆ ಕೋರ್ಟ್ ನಲ್ಲಿ ನಟ ದರ್ಶನ್ ಜೈಲು ಭವಿಷ್ಯ ನಿರ್ಧಾರ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ & ಗ್ಯಾಂಗ್ ಕಸ್ಟಡಿ ಅವಧಿ ನಾಳೆ (ಸೆ.9) ಕ್ಕೆ ಮುಕ್ತಾಯಗೊಳ್ಳಲಿದ್ದು, ನಟ ದರ್ಶನ್ ಜೈಲು ಭವಿಷ್ಯ ನಾಳೆ ನಿರ್ಧಾರವಾಗಲಿದೆ.

ವಿಡಿಯೋ ಕಾನ್ಪರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್’ಗೆ ಡಿ ಗ್ಯಾಂಗ್ ನ್ನು ಪೊಲೀಸರು ನಾಳೆ ಹಾಜರುಪಡಿಸಲಿದ್ದು, ನಾಳೆ ದರ್ಶನ್ ಜೈಲು ಭವಿಷ್ಯ ನಿರ್ಧಾರವಾಗಲಿದೆ. ಈಗಾಗಲೇ 4000 ಪುಟಗಳ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಲಾಗಿದ್ದು, ದಾಸನಿಗೆ ಕಾನೂನು ಕುಣಿಕೆ ಇನ್ನಷ್ಟು ಬಿಗಿಯಾಗಿದೆ. ಇದರ ನಡುವೆ ನಾಳೆ ದರ್ಶನ್ ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಮುಂದೆ ಇಂತಹ ಕೆಟ್ಟ ಕೆಲಸ ಮಾಡುವುದಿಲ್ಲ, ನನ್ನಿಂದ ದೊಡ್ಡ ತಪ್ಪಾಗಿದೆ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಸಾವಿಗೆ ಮೊದಲು ಪರಿಪರಿಯಾಗಿ ಕೇಳಿಕೊಂಡರು ನಟ ದರ್ಶನ್ ಮತ್ತು ಅವರ ಸಹಚರರು ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಂದಿದ್ದಾರೆ. ಈಗ ಡಿ ಗ್ಯಾಂಗ್ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...