alex Certify ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಬಳಿಕ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆ ದಾಖಲು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಿಕ್ಕಣ್ಣ ಸಾಕ್ಷಿ ಹೇಳಿಕೆ ಬೆನ್ನಲ್ಲೇ ದರ್ಶನ್ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ಪೊಲೀಸರು ಸಿಆರ್ಪಿಸಿ 164ರ ಅಡಿ ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ.

ಇದರೊಂದಿಗೆ ದರ್ಶನ್ ಅವರಿಗೆ ಅವರ ಆಪ್ತರೇ ಸಾಕ್ಷಿಗಳಾಗಿರುವುದು ಸಂಕಷ್ಟ ತಂದಿದೆ. ರೇಣುಕಾಸ್ವಾಮಿ ಹತ್ಯೆಗೆ ಮೊದಲು ದರ್ಶನ್ ಅವರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಕಾರಣ ನಟ ಯಶಸ್ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದುಕೊಂಡಿದ್ದಾರೆ.

ಇದೇ ಪಾರ್ಟಿಯಲ್ಲಿ ಭಾಗವಹಿಸಿದ್ದ ನಟ ಚಿಕ್ಕಣ್ಣ ಕೂಡ ಸಾಕ್ಷಿಯಾಗಿ ಈಗಾಗಲೇ ಹೇಳಿಕೆ ದಾಖಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆಗೂ ಮುನ್ನ ರಾಜರಾಜೇಶ್ವರಿ ನಗರದಲ್ಲಿರುವ ಪ್ರಕರಣದ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ಸ್ ಪಬ್ ನಲ್ಲಿ ದರ್ಶನ್ ಅವರೊಂದಿಗೆ ಚಿಕ್ಕಣ್ಣ ಮತ್ತು ಯಶಸ್ ಊಟ ಮಾಡಿದ್ದರು. ಹತ್ಯೆ ನಡೆದ ದಿನ ಪಬ್ ನಲ್ಲಿ ದರ್ಶನ್ ಅವರೊಂದಿಗೆ ಈ ಇಬ್ಬರು ನಟರು ಇದ್ದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಹಿನ್ನಲೆಯಲ್ಲಿ ನಟರಾದ ಚಿಕ್ಕಣ್ಣ ಮತ್ತು ಯಶಸ ಅವರನ್ನು ಪೊಲೀಸರು ಸಾಕ್ಷಿಗಳಾಗಿ ಪರಿಗಣಿಸಿ ಹೇಳಿಕೆ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...