alex Certify BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ A-1 , ನಟ ದರ್ಶನ್ A- 2 ಆರೋಪಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ರೇಣುಕಾಸ್ವಾಮಿ ಕೊಲೆ ಪ್ರಕರಣ : ಪವಿತ್ರಾ ಗೌಡ A-1 , ನಟ ದರ್ಶನ್ A- 2 ಆರೋಪಿ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಸಂಕಷ್ಟ ಎದುರಾಗಿದ್ದು, ಜೈಲು ಪಾಲಾಗುವ ಭೀತಿ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ , ಕೆ.ಪವನ್ ಎ-3 ಆರೋಪಿ ಎಂದು ಎಫ್ ಐ ಆರ್ ನಲ್ಲಿ ಹೆಸರಿಸಲಾಗಿದೆ. ಈ ಮೂಲಕ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಪಾತ್ರ ಇರುವುದು ಸ್ಪಷ್ಟವಾಗಿದೆ  ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ

ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ) ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ. ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ನಾಲ್ಕು ಮಂದಿ ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿದ್ದು, ಈ ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು ಎನ್ನಲಾಗಿದೆ. ಅವರ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...