ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಕುರಿತ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ.
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮತ್ತು ಸೆಷನ್ಸ್ ಕೋರ್ಟ್, ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್, ವಿನಯ್, ಕೇಶವಮೂರ್ತಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಈ ವೇಳೆ ಅರೋಪಿಗಳ ಪರ ಹಾಗೂ ಸರ್ಕಾರದ ಪರ ವಕೀಲರ ವಾದ-ಪ್ರತಿವಾದವನ್ನು ಆಲಿಸಿತು.
ಬಳಿಕ ಆರೋಪಿ ಪವಿತ್ರಾಗೌಡ, ಅನುಕುಮಾರ್ ಜಾಮೀನು ಅರ್ಜಿ ಕುರಿತ ತೀರ್ಪನ್ನು ಆಗಸ್ಟ್ 31ಕ್ಕೆ ಕೋರ್ಟ್ ಕಾಯ್ದಿರಿಸಿತು. ಇದೇ ವೇಳೆ ವಿನಯ್ ಹಾಗೂ ಕೇಶವ ಮೂರ್ತಿ ಜಾಮೀನು ಕುರುತ ಆದೇಶವನ್ನು ಸೆ.2ಕ್ಕೆ ಕಾಯ್ದಿಸಿದೆ.