alex Certify ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ದರ್ಶನ್ ಸಹಚರರ ಮತ್ತಷ್ಟು ದುಷ್ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ದರ್ಶನ್ ಸಹಚರರ ಮತ್ತಷ್ಟು ದುಷ್ಕೃತ್ಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿರುವ ಪೊಲೀಸರು ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ.

ರೇಣುಕಾಸ್ವಾಮಿ ಕೊಲೆ ಮಾಡಿದ ಬಳಿಕ ಲಕ್ಷ್ಮಣ ಹಾಗೂ ನಾಗರಾಜ್ ಆರ್.ಆರ್. ನಗರದ ಟ್ರೆಂಡ್ಸ್ ನಲ್ಲಿ ಹೊಸ ಬಟ್ಟೆ ಖರೀದಿಸಿದ್ದರು. ಹಳೆ ಬಟ್ಟೆ ಎಸೆದು ಹೊಸ ಬಟ್ಟೆ ಖರೀದಿಸಿದ್ದ ಆರೋಪಿಗಳು ನಂತರ ಗಣೇಶ ದೇವಾಲಯಕ್ಕೆ ಹೋಗಿ ಕೈ ಮುಗಿದಿದ್ದರು. ಆರ್.ಆರ್. ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಗಣೇಶ ದೇವಾಲಯಕ್ಕೆ ಹೋಗಿ ದೇವರಿಗೆ ಕೈ ಮುಗಿದಿದ್ದರು. ಸದ್ಯ ಆರೋಪಿಗಳನ್ನು ಕರೆದೊಯ್ದು ಪೊಲೀಸರು ಮಹಜರು ನಡೆಸಿದ್ದಾರೆ. ಟ್ರೆಂಡ್ಸ್ ಬಟ್ಟೆ ಶೋರೂಮ್ ಮತ್ತು ದೇವಸ್ಥಾನದ ಬಳಿ ಸ್ಥಳ ಮಹಜರು ನಡೆಸಲಾಗಿದೆ.

ಇನ್ನು ಪ್ರಕರಣದ ಮತ್ತೊಬ್ಬ ಆರೋಪಿ ಧನರಾಜ್ ಡಿಯೋ ಸ್ಕೂಟರ್ ನಲ್ಲಿ ಪಟ್ಟಣಗೆರೆ ಶೆಡ್ ಗೆ ಆಗಮಿಸಿದ್ದು, ಎಲೆಕ್ಟ್ರಿಕ್ ಡಿವೈಸ್ ತಂದಿದ್ದ. ಈ ಡಿವೈಸ್ ನಿಂದ ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ನೀಡಲಾಗಿತ್ತು ಎನ್ನಲಾಗಿದ್ದು, ತನಿಖೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...