alex Certify ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್: ರಾಜೀನಾಮೆ ನೀಡಿದ ಆಪ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್: ರಾಜೀನಾಮೆ ನೀಡಿದ ಆಪ್ತ

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆಗೆ ಮುಂದಾಗುತ್ತಿದ್ದಂತೆ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ.

ಜನಾರ್ದನ ರೆಡ್ಡಿ ಆಪ್ತ, ಬೂಡಾ ಮಾಜಿ ಅಧ್ಯಕ್ಷ ದಮ್ಮೂರು ಶೇಖರ್ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರು ಜನಾರ್ದನ ರೆಡ್ಡಿ ಅವರನ್ನು ನಡೆಸಿಕೊಂಡ ರೀತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದಮ್ಮೂರು ಶೇಖರ್ ಅವರು, ಜನಾರ್ದನ ರೆಡ್ಡಿ ಮತ್ತು ಅವರ ಕುಟುಂಬದವರು ಸಾಕಷ್ಟು ತೊಂದರೆ ಎದುರಿಸುವಂತಾಯಿತು. ಹೀಗಿದ್ದರೂ ಪಕ್ಷಕ್ಕಾಗಿ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಹೈಕಮಾಂಡ್ ಅವರನ್ನು ಗುರುತಿಸದಿರುವುದು ನಮ್ಮಂತಹ ಅಪಾರ ಕಾರ್ಯಕರ್ತರಿಗೆ ನೋವು ತಂದಿದೆ. ಹೀಗಾಗಿ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿರುವುದಾಗಿ ದಮ್ಮೂರು ಶೇಖರ್ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...