alex Certify ಪರಪ್ಪನ ಅಗ್ರಹಾರದಲ್ಲಿ ನಿದ್ರೆ ಇಲ್ಲದೆ ರಾತ್ರಿ ಕಳೆದ ರೇವಣ್ಣ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಪ್ಪನ ಅಗ್ರಹಾರದಲ್ಲಿ ನಿದ್ರೆ ಇಲ್ಲದೆ ರಾತ್ರಿ ಕಳೆದ ರೇವಣ್ಣ…!

ಮಹಿಳೆಯ ಅಪಹರಣ ಪ್ರಕರಣ : ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿ ಕಳೆದ ಎರಡು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಗುರುವಾರ ತಮಗೆ ಜಾಮೀನು ಸಿಗಬಹುದೆಂಬ ನಿರೀಕ್ಷೆ ಹೊಂದಿದ್ದು, ಅದು ಹುಸಿಯಾಗಿರುವ ಕಾರಣ ಮಂಕಾಗಿದ್ದಾರೆ ಎನ್ನಲಾಗಿದೆ.

ಕಳೆದ ರಾತ್ರಿ ರೇವಣ್ಣ ಅವರಿಗೆ ಮುದ್ದೆ, ಚಪಾತಿ, ಅನ್ನ, ಸಾಂಬಾರ್ ನೀಡಿದ್ದು ತಡವಾಗಿ ಊಟ ಮಾಡಿದರು ಎನ್ನಲಾಗಿದೆ. ಅಲ್ಲದೆ ರಾತ್ರಿಯಿಡಿ ನಿದ್ರೆ ಇಲ್ಲದೆ ಕಾಲ ಕಳೆದಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ರೇವಣ್ಣ ಅವರ ಆರೋಗ್ಯದ ಮೇಲೆ ಕಾರಾಗೃಹದ ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಜಾಮೀನು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾಗಿದ್ದು, ಅಂದಾದರೂ ತಮಗೆ ರಿಲೀಫ್ ಸಿಗಬಹುದಾ ಎಂಬ ನಿರೀಕ್ಷೆಯಲ್ಲಿ ರೇವಣ್ಣ ಇದ್ದಾರೆ. ಅಲ್ಲದೆ ತಮ್ಮನ್ನು ಭೇಟಿಯಾಗಲು ಬಂದವರ ಬಳಿ ರೇವಣ್ಣ, ತಮ್ಮ ಮನಸ್ಸಿನ ದುಗುಡ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...