alex Certify BREAKING : ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ತೆಲಂಗಾಣ ಶಾಸಕಾಂಗ ಪಕ್ಷದ ನಾಯಕನಾಗಿ ರೇವಂತ್ ರೆಡ್ಡಿ ಆಯ್ಕೆಯಾಗಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಹೈದರಾಬಾದ್ ನ ಗಚ್ಚಿಬೌಲಿ ಬಳಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸಿಎಲ್ ಪಿ ಸಭೆ ನಿರ್ಧಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೂಡ ಮಾಹಿತಿ ನೀಡಿದ್ದಾರೆ. ಕೆಲವೇ ಗಂಟೆಗಳಲ್ಲಿ ಈ ಬಗ್ಗೆ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಲಿದೆ.

ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್​ಎಸ್ (ಭಾರತ್​ ರಾಷ್ಟ್ರ ಸಮಿತಿ)ನ್ನು ಸೋಲಿಸಿ ಕಾಂಗ್ರೆಸ್​ ಆಡಳಿತ ಚುಕ್ಕಾಣಿ ಹಿಡಿದಿದೆ. ಕಳೆದ ಎರಡು ಅವಧಿಗೆ ಆಡಳಿತ ನಡೆಸಿದ ಕೆಸಿಆರ್​ ನೇತೃತ್ವದ ಬಿಆರ್​ಎಸ್ ಪಕ್ಷ ಈ ಬಾರಿ ಅಧಿಕಾರವನ್ನು ಕಳೆದುಕೊಂಡಿದೆ. 119 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್​ 64 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...