alex Certify ಕೇಂದ್ರದ 5 ಕೆಜಿ ಅಕ್ಕಿ ಜತೆ ರಾಜ್ಯದ 10 ಕೆಜಿ ಅಕ್ಕಿ ಕೊಡ್ತಿರಾ…? ಅಶ್ವತ್ಥ್ ನಾರಾಯಣ್ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರದ 5 ಕೆಜಿ ಅಕ್ಕಿ ಜತೆ ರಾಜ್ಯದ 10 ಕೆಜಿ ಅಕ್ಕಿ ಕೊಡ್ತಿರಾ…? ಅಶ್ವತ್ಥ್ ನಾರಾಯಣ್ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದರ ಕುರಿತಾಗಿ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಅಕ್ಕಿ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ 5 ಕೆಜಿ ಅಕ್ಕಿ ಕೊಡುತ್ತಿದ್ದು, ಬಸವರಾಜ ಬೊಮ್ಮಾಯಿ ಒಂದು ಕೆಜಿ ಅಕ್ಕಿ ಸೇರಿಸಿ ಆರು ಕೆಜಿ ನೀಡುತ್ತಿದ್ದರು. ಈ ಆರು ಕೆಜಿ ಅಕ್ಕಿ ಜೊತೆಗೆ ಕಾಂಗ್ರೆಸ್ ಸರ್ಕಾರ 10 ಕೆಜಿ ಸೇರಿಸಿ 16 ಕೆಜಿ ಅಕ್ಕಿ ಕೊಡುತ್ತದೆಯೇ ಅಥವಾ ಮೋದಿ ಸರ್ಕಾರ ನೀಡುತ್ತಿರುವ 5 ಕೆಜಿಗೆ 5 ಕೆಜಿ ಸೇರಿಸಿ 10 ಕೆಜಿ ಅಕ್ಕಿ ಕೊಡುತ್ತದೆಯೇ ಎಂಬುದರ ಬಗ್ಗೆ ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ 5 ಕೆಜಿಗೆ 5 ಕೆಜಿ ಅಕ್ಕಿ ಸೇರಿಸಿದರೆ ಅವರದು ಕೇವಲ 5 ಕೆಜಿ ಆಗಲಿದೆ. 10 ಕೆಜಿ ಆಗುವುದಿಲ್ಲ. ಕಾಂಗ್ರೆಸ್ ನವರು ಕೊಟ್ಟ ಮಾತಿನಂತೆ ನಡೆಯುವುದಾದರೆ 15 ಕೆಜಿ ಅಕ್ಕಿ ಕೊಡಬೇಕು. ಈ ಕುರಿತು ಬಿಜೆಪಿ ಸ್ಪಷ್ಟನೆ ಕೇಳುತ್ತದೆ. ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...