alex Certify ಏ. 1 ರಿಂದ ಪಡಿತರ ವಿತರಣೆಯಲ್ಲಿ ಭಾರೀ ಬದಲಾವಣೆ: ಅಕ್ಕಿ ಕಡಿತ – ಅಷ್ಟೇ ಪ್ರಮಾಣದ ರಾಗಿ, ಜೋಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏ. 1 ರಿಂದ ಪಡಿತರ ವಿತರಣೆಯಲ್ಲಿ ಭಾರೀ ಬದಲಾವಣೆ: ಅಕ್ಕಿ ಕಡಿತ – ಅಷ್ಟೇ ಪ್ರಮಾಣದ ರಾಗಿ, ಜೋಳ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ.

ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು ಕೂಡ ಕಡಿತ ಮಾಡಲು ನಿರ್ಧರಿಸಲಾಗಿದ್ದು 35 ಕೆಜಿ ಅಕ್ಕಿಯ ಬದಲು 15 ಕೆಜಿ ಅಕ್ಕಿ ಜೊತೆಗೆ 20 ಕೆಜಿ ರಾಗಿ ವಿತರಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಪ್ರತಿ ತಿಂಗಳು 35 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ಇದರಲ್ಲಿ ಕಡಿತಗೊಳಿಸಿ 15 ಕೆಜಿ ಅಕ್ಕಿ, 20 ಕೆಜಿ ರಾಗಿ ನೀಡಲಾಗುವುದು. ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ದಕ್ಷಿಣ ಕರ್ನಾಟಕದಲ್ಲಿ ಪ್ರತಿ ಸದಸ್ಯನಿಗೆ 2 ಕೆಜಿ ಅಕ್ಕಿ, 3 ಕೆಜಿ ರಾಗಿ, ಪ್ರತಿ ಕಾರ್ಡ್ ಗೆ 2 ಕೆಜಿ ಗೋಧಿ ನೀಡಲಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ 2 ಕೆಜಿ ಅಕ್ಕಿ, 3 ಕೆಜಿ ಜೋಳ, ಪ್ರತಿ ಕಾರ್ಡ್ ಗೆ 2 ಕೆಜಿ ಗೋಧಿ ನೀಡಲಾಗುವುದು. ಏಪ್ರಿಲ್ 1 ರಿಂದ ಹೊಸ ವ್ಯವಸ್ಥೆಯಡಿ ಪಡಿತರ ವಿತರಿಸಲು ಆಹಾರ ಇಲಾಖೆ ಕ್ರಮಕೈಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...