alex Certify ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಮಾರಧಾರ ನದಿಯಲ್ಲಿ ಮುಳುಗಿ ಬಾಲಕಿಯರಿಬ್ಬರು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೋಲಿಸ್ ಠಾಣೆ ವ್ಯಾಪ್ತಿಯ ಬಳ್ಪೆ ಸಮೀಪ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದೆ.

ಮೂಲತಃ ಬಳ್ಪೆ ಕಣ್ಮಲ್ ನವರಾದ ಬೆಂಗಳೂರಿನಲ್ಲಿ ವಾಸವಾಗಿರುವ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಹಂಸಿತಾ(16), ಅವಂತಿಕಾ(13) ನೀರಿನಲ್ಲಿ ಮುಳುಗಿದ ಬಾಲಕಿಯರಾಗಿದ್ದಾರೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ತಾಯಿಯೊಂದಿಗೆ ಬಳ್ಪೆಯ ಚಿಕ್ಕಪ್ಪನ ಮನೆಗೆ ಬಂದಿದ್ದರು.

ನದಿಯ ಸಮೀಪದಲ್ಲೇ ಅವರ ಮನೆ ಇದ್ದು, ನದಿಯ ಆಳದ ಅರಿವಿರದ ಇಬ್ಬರು ನದಿಗೆ ಇಳಿದು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ರಾತ್ರಿ ವೇಳೆಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಅಗ್ನಿಶಾಮಕದಳ ಸಿಬ್ಬಂದಿ, ಸ್ಥಳೀಯರು ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ. ಸುಬ್ರಹ್ಮಣ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...