alex Certify ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಶಾಸಕಿ ರೂಪಾ ಶಶಿಧರ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರದಿಂದ ಸಿದ್ಧರಾಮಯ್ಯ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಶಾಸಕಿ ರೂಪಾ ಶಶಿಧರ್ ಮಹತ್ವದ ಹೇಳಿಕೆ

ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷದ ಸಂಘಟನೆಗೆ ಸಿದ್ದರಾಮಯ್ಯ ರಾಜ್ಯ ಪ್ರವಾಸ ಮಾಡಬೇಕಿದೆ. ಯಾವುದೇ ಕ್ಷೇತ್ರದಲ್ಲಿ ನಿಂತರೂ ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಮುಖಂಡರು ಕಾರ್ಯಕರ್ತರು ಅವರ ವಿರುದ್ಧ ಹೇಳಿಕೆ ಕೊಡುವುದಿಲ್ಲ ಎಂದರು.

ಪಕ್ಷದಲ್ಲಿ ಗೊಂದಲ ನಿವಾರಣೆ ಮಾಡುವ ಕೆಲಸ ನಡೆಯಬೇಕಿದೆ. ಪಕ್ಷದಲ್ಲಿನ ಕೆಲವು ಆಂತರಿಕ ವಿಚಾರಗಳನ್ನು ಬಗ್ಗೆ ಚರ್ಚೆ ಮಾಡಬೇಕಿದೆ. ಕಷ್ಟದಲ್ಲಿದ್ದಾಗ ಪಕ್ಷ ಕಟ್ಟಿದವರನ್ನು ಎಂದಿಗೂ ಮರೆಯಬಾರದು ಎಂದು ಹೇಳುವ ಮೂಲಕ ಪರೋಕ್ಷವಾಗಿ ಮುನಿಯಪ್ಪರನ್ನು ಕಡೆಗಣಿಸಿದಂತೆ ಎಂದು ತಿಳಿಸಿದ್ದಾರೆ.

ಪಕ್ಷ ನಿಷ್ಠೆಯಿಂದ ಇರುವವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ. ಹೀಗೆ ಹೇಳಿದರೆ ಎಲ್ಲಾ ನಾಯಕರು ಅವರನ್ನು ಸ್ವಾಗತ ಮಾಡುತ್ತೇವೆ. ಜೊತೆಗೆ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಾಗಿ ಸ್ವಾಗತಿಸುವೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಅವಕಾಶ ಕೊಡುವುದಿಲ್ಲ. ಆದರೆ ಪಕ್ಷದ ಗೌರವ ಎತ್ತಿ ಹಿಡಿಯುವವರಿಗೆ ಎಲ್ಲವೂ ಸಿಗುತ್ತದೆ ಎಂದು ಶಾಸಕಿ ರೂಪಕಲಾ ಶಶಿಧರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...