alex Certify ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ ಅಧ್ಯಕ್ಷ, ಕೊಲೆ ಆರೋಪಿ ಕುಲಕರ್ಣಿ ಕಾಂಗ್ರೆಸ್ ನಾಯಕ: ಬಿಜೆಪಿ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿಕೆಶಿ ಅಧ್ಯಕ್ಷ, ಕೊಲೆ ಆರೋಪಿ ಕುಲಕರ್ಣಿ ಕಾಂಗ್ರೆಸ್ ನಾಯಕ: ಬಿಜೆಪಿ ಆರೋಪ

ಬೆಂಗಳೂರು: ರೌಡಿಶೀಟರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಟೀಕೆಗೆ ಟ್ವೀಟ್ ಮೂಲಕ ಬಿಜೆಪಿ ತಿರುಗೇಟು ನೀಡಿದೆ.

ಭೂಗತ ಪಾತಕಿಗಳ ಗರಡಿಯಲ್ಲಿ ಬೆಳೆದ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕೊಲೆ ಆರೋಪಿ ವಿನಯ್ ಕುಲಕರ್ಣಿ, ಗೂಂಡಾಗಿರಿಯ ಮೊಹಮ್ಮದ್ ನಲಪಾಡ್ ಪಕ್ಷದ ನಾಯಕರು. ಕಾಂಗ್ರೆಸ್‌ ರೌಡಿಗಳನ್ನು ಖಂಡಿಸುತ್ತದೆಯಂತೆ! ಮೊದಲು ನಿಮ್ಮ ಪಕ್ಷದ ನಾಯಕರ “ಆ ದಿನಗಳು” ಹೇಗಿವೆ ಅಂತ ನೋಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಒಂದು ಕಾಲದಲ್ಲಿ ಕೊತ್ವಾಲ್‌ನ ನೆಚ್ಚಿನ ಶಿಷ್ಯ! ತಿಹಾರ್ ಜೈಲಿನಿಂದ ಬಂದವರಿಗೆ ಕಾಂಗ್ರೆಸ್  ರಾಜ್ಯಾಧ್ಯಕ್ಷ ಹುದ್ದೆಗೆ ಭಡ್ತಿ. ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರ “ಆ ದಿನಗಳು” ಮರೆತು ಹೋಗಿದೆಯಾ? ಎಂದು ಪ್ರಶ್ನಿಸಿದೆ.

ಗೂಂಡಾಗಿರಿ, ರೌಡಿಸಂ ಮೇರಿಟ್ ಅಂತ ಪರಿಗಣಿಸಿ, ವಿರೋಧದ ನಡುವೆಯೂ ನಲಪಾಡ್ ಇತ್ತೀಚೆಗೆ ಯುವಕಾಂಗ್ರೆಸ್  ರಾಜ್ಯಾಧ್ಯಕ್ಷರಾದರು. ನಿಮಗೆ ಯೂತ್ ಕಾಂಗ್ರೆಸ್ ಅಧ್ಯಕ್ಷರ “ಆ ದಿನಗಳು” ಮರೆತು ಹೋಗಿದೆಯಾ ಎಂದು ಟ್ವೀಟ್ ಮಾಡಿ ಪ್ರಶ್ನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...