alex Certify ಕಣ್ಣೆದುರಲ್ಲೇ ಆರ್.ಎಸ್.ಎಸ್. ಕಾರ್ಯಕರ್ತನ ಬರ್ಬರ ಹತ್ಯೆ, ಚೆಲ್ಲಿದ ರಕ್ತ ಕಂಡು ಆಘಾತದಿಂದ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣೆದುರಲ್ಲೇ ಆರ್.ಎಸ್.ಎಸ್. ಕಾರ್ಯಕರ್ತನ ಬರ್ಬರ ಹತ್ಯೆ, ಚೆಲ್ಲಿದ ರಕ್ತ ಕಂಡು ಆಘಾತದಿಂದ ವ್ಯಕ್ತಿ ಸಾವು

ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಲಂಪುಳದಲ್ಲಿ ಆರ್.ಎಸ್.ಎಸ್. ಸ್ಥಳಿಯ ಮುಖಂಡನೊಬ್ಬನನ್ನ ಪತ್ನಿ ಎದುರಲ್ಲೇ ಕೊಚ್ಚಿ ಕೊಲೆ ಮಾಡಲಾಗಿದೆ. ಈ ದೃಶ್ಯವನ್ನು ಕಂಡ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಆಘಾತದಿಂದ ಸಾವನ್ನಪ್ಪಿದ್ದಾರೆ.

ಎಲಪ್ಪುಲಿ ಮೂಲದ ಸಂಜಿತ್(27) ಮೃತಪಟ್ಟ ಆರ್.ಎಸ್.ಎಸ್. ಕಾರ್ಯಕರ್ತ. ಪತ್ನಿಯೊಂದಿಗೆ ಮುಂಬರಂ ಪ್ರದೇಶದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ತಂಡವೊಂದು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ. ಸಂಜಿತ್ ಆರ್.ಎಸ್.ಎಸ್. ಮಂಡಲಂ ಬೌದ್ಧಿಕ್ ಪ್ರಮುಖ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ನಿಯೊಂದಿಗೆ ದ್ವಿಚಕ್ರವಾಹನದಲ್ಲಿ ತೆರಳುವಾಗ ಅವರನ್ನು ಹಿಂಬಾಲಿಸಿ ಬಂದ ವಾಹನ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಅವರ ಮೇಲೆ ದಾಳಿ ಮಾಡಿದವರು 50 ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಪತ್ನಿ ಎದುರಲ್ಲೇ ರಕ್ತದ ಮಡುವಿನಲ್ಲಿ ಸಂಜಿತ್ ಪ್ರಾಣ ಬಿಟ್ಟಿದ್ದು, ಈ ದೃಶ್ಯವನ್ನು ಕಣ್ಣಾರೆ ಕಂಡ ಮಾರುತ ರಸ್ತೆಯ ನಿವಾಸಿ 56 ವರ್ಷದ ರಾಮು ಆಘಾತಕ್ಕೆ ಒಳಗಾಗಿದ್ದಾರೆ. ಸಂಜಿತ್ ನನ್ನು ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದನ್ನು ಕಂಡ ರಾಮು ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಂ. ಹರಿದಾಸ್ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಘಟಕವಾಗಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...