alex Certify BIG NEWS: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ ಕಠಿಣ ನಿಯಮ, ಲಾಕ್ಡೌನ್ ಜಾರಿ ಬಗ್ಗೆ ಇಂದು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ ಕಠಿಣ ನಿಯಮ, ಲಾಕ್ಡೌನ್ ಜಾರಿ ಬಗ್ಗೆ ಇಂದು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ.

ಸಭೆಯಲ್ಲಿ ಕಠಿಣ ನಿಯಮ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ತಜ್ಞರು ಕಠಿಣ ನಿಯಮ, ಸೆಮಿ ಲಾಕ್ಡೌನ್ ಜಾರಿ ಸೇರಿ ಹಲವು ಸಲಹೆ ಬಗ್ಗೆ ಪ್ರಸ್ತಾಪಿಸಿದ್ದು ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಸೆಮಿ ಲಾಕ್ ಡೌನ್ ಜಾರಿ ಬಗ್ಗೆ ತೀರ್ಮಾನ ಕೈಗೊಳ್ಳುತ್ತದೆ.

ಮತ್ತೆ ಲಾಕ್ ಡೌನ್ ಜಾರಿ ಮಾಡಿದರೆ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ. ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಲಾಕ್ ಡೌನ್ ಜಾರಿ ಮಾಡಲ್ಲ. ಸಭೆ-ಸಮಾರಂಭ ಕಾರ್ಯಕ್ರಮಗಳಿಗೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಜನ ಸೇರಲು ನಿರ್ಬಂಧ ಹೇರಿ ಕಠಿಣ ನಿಯಮ ಜಾರಿಗೆ ತರಲಾಗುವುದು. ಮಾರುಕಟ್ಟೆ, ದೇವಾಲಯದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ನಿಯಮಗಳ ಕಡ್ಡಾಯ ಪಾಲನೆಗೆ ಸೂಚಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...