alex Certify BIG BREAKING: ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕಠಿಣ ನಿರ್ಬಂಧ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಕಠಿಣ ನಿರ್ಬಂಧ ಜಾರಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸುಳಿವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ತಜ್ಞರೊಂದಿಗೆ ಸಭೆ ನಡೆಸಲಾಗುತ್ತದೆ. ನಾಳೆ ಸಂಜೆ ತಜ್ಞರೊಂದಿಗೆ ಸಭೆ ನಡೆಸಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳಿನ ಸಭೆಯಲ್ಲಿ ತಜ್ಞರ ಸಲಹೆ ಪಡೆದು, ಗುರುವಾರ ಕ್ಯಾಬಿನೆಟ್ ಸಭೆಯಲ್ಲಿ ರಾಜ್ಯದ ಕೋವಿಡ್ ಸ್ಥಿತಿಗತಿಗಳ ಬಗ್ಗೆ ಮತ್ತು ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊರೋನಾ ನಿಯಂತ್ರಣಕ್ಕೆ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ಹಿಂದಿನ ಎರಡು ಅಲೆಗಳ ಅನುಭವ ಹಿನ್ನೆಲೆಯಲ್ಲಿ. ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ಕೊರೋನಾ ನಿಯಂತ್ರಿಸಲು ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲು ತಜ್ಞರಿಗೆ ತಿಳಿಸಲಾಗಿದೆ.

ರಾಜ್ಯವನ್ನು ಸುರಕ್ಷಾ ಚಕ್ರದ ಒಳಗೆ ತರುವ ನಿಟ್ಟಿನಲ್ಲಿ ಮಕ್ಕಳಿಗೆ ಲಸಿಕೆ ಅಭಿಯಾನ ಕೈಗೊಳ್ಳಲಾಗಿದೆ. ಶಿಕ್ಷಕರು, ಶಾಲೆಗಳ ಆಡಳಿತ ಮಂಡಳಿ, ಆರೋಗ್ಯ ಕಾರ್ಯಕರ್ತರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಈ ಹಿಂದೆ ಎರಡು ಸಲ ಕೊರೋನಾ ಸಂಕಷ್ಟ ತಂದಿದೆ. ಈಗ ಸೋಂಕು ನಿಯಂತ್ರಣಕ್ಕೆ ಸ್ವಯಂ ನಿಯಂತ್ರಣ ಕೈಗೊಳ್ಳಬೇಕು. ಮಾಸ್ಕ್ ಧರಿಸುವುದು, ಅಂತರ ಕಾಯ್ದುಕೊಳ್ಳುವುದನ್ನು ಮಾಡಬೇಕೆಂದು ಜನತೆಗೆ ಮನವಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...