alex Certify ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ.

ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ ಸವಾರರು ದಂಡ ಪಾವತಿಸುತ್ತೇವೆ. ತಮ್ಮ ವಾಹನ ಬಿಡುವಂತೆ ಮನವಿ ಮಾಡುತ್ತಿದ್ದಾರೆ. ಆದರೆ, ಸರ್ಕಾರದ ಆದೇಶ ಬರುವವರೆಗೆ ವಾಹನಗಳನ್ನು ಬಿಡುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...