alex Certify ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನ – ಅಗಲಿದ ನಾಯಕನಿಗೆ ಕಂಬನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನ – ಅಗಲಿದ ನಾಯಕನಿಗೆ ಕಂಬನಿ

ಚಿಕ್ಕಮಗಳೂರು: ನಿನ್ನೆ ರಾತ್ರಿ ನಿಧನರಾದ ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸರಪನಹಳ್ಳಿ ಸಮೀಪದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿದೆ.

ನಿನ್ನೆ ರಾತ್ರಿ ಧರ್ಮೇಗೌಡರು ಚಲಿಸುತ್ತಿದ್ದ ಜನಶತಾಬ್ಧಿ ರೈಲ್ ಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಮರಣೋತ್ತರ ಪರೀಕ್ಷೆ ನಂತರ ಸಖರಾಯಪಟ್ಟಣ ಸರಪನಹಳ್ಳಿಗೆ ಮೃತದೇಹ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಗಣ್ಯರು, ಬೆಂಬಲಿಗರು, ಕಾರ್ಯಕರ್ತರು ಅಂತಿಮ ದರ್ಶನ ಪಡೆದ ನಂತರ ತೋಟಕ್ಕೆ ಮೃತದೇಹ ತರಲಾಗಿದ್ದು, ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ತಂದೆಯ ಚಿತೆಗೆ ಪುತ್ರ ಎಸ್.ಡಿ. ಸೋನಾಲ್ ಅಗ್ನಿಸ್ಪರ್ಶ ಮಾಡಿದ್ದಾರೆ. ಕುಟುಂಬದವರು, ಬಂಧು, ಬಾಂಧವರು, ಗಣ್ಯರು ಸೇರಿದಂತೆ ಅಪಾರ ಸಂಖ್ಯೆಯ ಜನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು, ಅಗಲಿದ ನಾಯಕನಿಗೆ ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...