alex Certify ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ ಸಕಾಲ ಮಿತ್ರರನ್ನು ನೇಮಕ ಮಾಡಿಕೊಳ್ಳುವಂತೆ ಸಕಾಲ ಮಿಷನ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಪರ ಮಿಷನ್ ನಿರ್ದೇಶಕರು ತಿಳಿಸಿದ್ದಾರೆ.

ಸಕಾಲ ಮಿತ್ರ ಯೋಜನೆಗೆ ಆಸಕ್ತಿಯುಳ್ಳ ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್‍ಜಿಒಗಳು)  ಜ.24 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸುವುದು. ಈ ಯೋಜನೆ ಅಡಿ ಯಾವುದೇ ರೀತಿಯ ಆರ್ಥಿಕ ಬಾದ್ಯತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು  ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಕಾಲ ಸಮಾಲೋಚಕರಾದ ಸೈಯದ್ ಮೊಹಮ್ಮದ್ ಹುಸೈನಿ ಮೊ.9945732165 ಅಥವಾ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...