alex Certify ಸಕಾಲ ಮಿತ್ರರ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಕಾಲ ಮಿತ್ರರ ನೇಮಕಾತಿಗೆ ಅರ್ಜಿ ಆಹ್ವಾನ

ರಾಯಚೂರು: ರಾಜ್ಯದ ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯಲ್ಲಿ ಪ್ರಸ್ತುತ 99 ಇಲಾಖೆಗಳ ಹಾಗೂ 1115 ಸೇವೆ ಸಂಸ್ಥೆಗಳನ್ನು ಸೇರ್ಪಡೆ ಮಾಡಲಾಗಿದ್ದು, ನಾಗರಿಕರಲ್ಲಿ ಸಕಾಲ ಯೋಜನೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ ಮುಖಾಂತರ ಸಕಾಲ ಮಿತ್ರರನ್ನಾಗಿ ನೇಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿ ಈ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ ಸಕಾಲ ಮಿತ್ರರನ್ನಾಗಿ ನೇಮಕ ಮಾಡಿ ಸಕಾಲ ಮಿತ್ರರಿಗೆ ಅಗತ್ಯ ತರಬೇತಿಯನ್ನು ಸಕಾಲ ಮಿಷನ್ ವತಿಯಿಂದ ಒದಗಿಸಲಾಗುವುದು.

ಈ ಯೋಜನೆಯಡಿಯಲ್ಲಿ ಯಾವುದೇ ರೀತಿಯ ಆರ್ಥಿಕ ಸೌಲಭ್ಯಗಳು ಇರುವುದಿಲ್ಲ. ಆಸಕ್ತಿಯುಳ್ಳ ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆಗಳು ಜಿಲ್ಲಾಧಿಕಾರಿಗಳು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯ ಸಕಾಲ ಜಿಲ್ಲಾ ಸಮಾಲೋಚಕರ ದೂರವಾಣಿ ಸಂಖ್ಯೆ: 9972583153ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...