alex Certify ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರ ನೇಮಕಾತಿ

ಮಡಿಕೇರಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರನ್ನು ನೇಮಕ ಮಾಡುವ ಸಂಬಂಧ ಸಕಾಲ ಮಿಷನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ತಯಾರಿ ನಡೆಸಿದೆ.

ರಾಜ್ಯದ ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆ ಒದಗಿಸುವ ಉದ್ದೇಶದಿಂದ 2012 ರಲ್ಲಿ ಪ್ರಾರಂಭಿಸಲಾದ ಸಕಾಲ ಯೋಜನೆಯಲ್ಲಿ ಪ್ರಸ್ತುತ 99 ಇಲಾಖೆಗಳ/ ಸಂಸ್ಥೆಗಳ 1115 ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. ಆದಾಗ್ಯೂ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಪೂರ್ಣ ಮಾಹಿತಿ/ ವಿವರ ಲಭ್ಯವಿರುವುದಿಲ್ಲ.

ಆದ್ದರಿಂದ ನಾಗರಿಕರಲ್ಲಿ ಸಕಾಲ ಯೋಜನೆಯ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ವ್ಯಾಪ್ತಿಯಲ್ಲಿ ಆಸಕ್ತಿ ಇರುವ ವ್ಯಕ್ತಿಗಳನ್ನು ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್‍ಜಿಒ) ಮುಖಾಂತರ ‘ಸಕಾಲ ಮಿತ್ರ’ರನ್ನು ನೇಮಕ ಮಾಡಿಕೊಳ್ಳುವಂತೆ ಅಪರ ಸಕಾಲ ಮಿಷನ್ ನಿರ್ದೇಶಕರು ತಿಳಿಸಿದ್ದಾರೆ.

‘ಸಕಾಲ ಮಿತ್ರ’ ಯೋಜನೆಗೆ ಆಸಕ್ತಿಯುಳ್ಳ ಯಾವುದೇ ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್‍ಜಿಒ) ಗಳು ಡಿಸೆಂಬರ್, 31 ರೊಳಗೆ ಜಿಲ್ಲಾಧಿಕಾರಿ ಅವರ ಕಚೇರಿಯನ್ನು ಸಂಪರ್ಕಿಸುವುದು. ಈ ಯೋಜನೆಯಡಿ ಯಾವುದೇ ರೀತಿಯ ಆರ್ಥಿಕ ಭಾಧ್ಯತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಸಂದೇಶ್ ಎಚ್.ಎಸ್., ಸಕಾಲ ಸಮಾಲೋಚಕರು, ಜಿಲ್ಲಾಧಿಕಾರಿ ಅವರ  ಕಚೇರಿ, ಕೊಡಗು ಜಿಲ್ಲೆ ಇವರನ್ನು ಮೊ.ಸಂ. 9591793660 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...