alex Certify ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಉಡುಪಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮುಖ್ಯ ಮಾಹಿತಿ ನೀಡಿದ್ದಾರೆ.

ಉಡುಪಿಯ ಜಿಲ್ಲಾ ಸರ್ಕಾರಿ ನೌಕರರ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಡಿಸೆಂಬರ್ ಒಳಗೆ ರಾಜ್ಯ ಸರ್ಕಾರಿ ನೌಕರರ 7ನೇ ವೇತನ ಆಯೋಗದ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಸಂಘ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

7ನೇ ವೇತನ ಆಯೋಗದ ರಚನೆ ಕುರಿತಾಗಿ ತಿಂಗಳಲ್ಲಿ ಸಮಿತಿ ರಚನೆಯಾಗಲಿದೆ. ಡಿಸೆಂಬರ್ ಒಳಗೆ ಸೌಲಭ್ಯ ಕಲ್ಪಿಸಲು ಒತ್ತಾಯಿಸಲಾಗಿದೆ. ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತರಿಗೆ ನಗದು ರಹಿತವಾಗಿ ಉಚಿತ ಚಿಕಿತ್ಸೆ ನೀಡುವ ಯೋಜನೆ ಕೂಡ ಶೀಘ್ರವೇ ಜಾರಿಯಾಗಲಿದೆ. ಕೆಜಿಐಡಿ ಸೌಲಭ್ಯಕ್ಕೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದಲ್ಲಿ ವಾರದೊಳಗೆ ಸಾಲದ ಮೊತ್ತ ಖಾತೆಗೆ ಜಮೆಯಾಗುವ ವ್ಯವಸ್ಥೆಯನ್ನು ತಿಂಗಳೊಳಗೆ ಜಾರಿಗೆ ತರುವ ಚಿಂತನೆ ಇದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...