alex Certify ಸಿಎಂ ಬದಲಾವಣೆ ಬೆಳವಣಿಗೆಗಳ ಬೆನ್ನಲ್ಲೇ ಸ್ವಾಮೀಜಿಗಳಿಂದ ಅಚ್ಚರಿಯ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬದಲಾವಣೆ ಬೆಳವಣಿಗೆಗಳ ಬೆನ್ನಲ್ಲೇ ಸ್ವಾಮೀಜಿಗಳಿಂದ ಅಚ್ಚರಿಯ ನಡೆ

ಬೆಂಗಳೂರು: ಸಿಎಂ ಬದಲಾವಣೆಯ ಚರ್ಚೆ ಬೆನ್ನಲ್ಲೇ ಎಲ್ಲ ಸಮುದಾಯದ ಶ್ರೀಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಜುಲೈ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಠಾಧೀಶರ ಸಮಾವೇಶ ನಡೆಸಲಾಗುತ್ತಿದೆ.

ನಾಡಿನ ಹಿತದೃಷ್ಟಿ, ಪ್ರಸ್ತುತ ಬೆಳವಣಿಗೆಯ ಕುರಿತು ಚರ್ಚೆ ನಡೆಸಲು ಸಮಾವೇಶ ನಡೆಸಲಾಗುತ್ತದೆ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಸ್ವಾಮೀಜಿಗಳ ಶಕ್ತಿ ಪ್ರದರ್ಶನ ನಡೆಸಲಾಗುತ್ತಿದೆ. ರಾಜ್ಯದ ಎಲ್ಲಾ ಮಠಾಧಿಪತಿಗಳು 25 ರಂದು ನಡೆಯಲಿರುವ ಮಠಾಧೀಶರ ಸಮಾವೇಶಕ್ಕೆ ಆಗಮಿಸಬೇಕೆಂದು ದಿಂಗಾಲೇಶ್ವರ ಶ್ರೀಗಳು ಸೇರಿದಂತೆ ಹಲವು ಮಠಾಧೀಶರು ಮನವಿ ಮಾಡಿದ್ದಾರೆ.

ಅನ್ಯಾಯವಾದಾಗ ಮಠಾಧೀಶರು ಮಧ್ಯ ಪ್ರವೇಶಿಸುತ್ತಾರೆ. ಒಬ್ಬ ವ್ಯಕ್ತಿಗೆ ಅನ್ಯಾಯವಾದಾಗ ಕೇಳುವುದರಲ್ಲಿ ತಪ್ಪಿಲ್ಲ. ಅನ್ಯಾಯದ ಸಂದರ್ಭದಲ್ಲಿ ಮಾರ್ಗದರ್ಶನ ಮಾಡಬೇಕಾಗುತ್ತದೆ. ನಾವು ಯಾವುದೇ ಹೊಸ ಸಂಪ್ರದಾಯ ಮಾಡಿಕೊಂಡಿಲ್ಲ. ಯಾವುದೇ ವ್ಯಕ್ತಿಯ ಕುರಿತು ಸಮಾವೇಶ ಮಾಡುತ್ತಿಲ್ಲ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಶ್ರೀಗಳು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...