alex Certify ಶುಭ ಸುದ್ದಿ: ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ವಿತರಣೆ

ಹೊಸ ಮರಳು ನೀತಿ ಅನುಷ್ಠಾನಗೊಳಿಸಲಿದ್ದು, 10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಾಣ ಮಾಡುವವರಿಗೆ ಉಚಿತವಾಗಿ ಮರಳು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್. ಲಿಂಗಮೂರ್ತಿ ತಿಳಿಸಿದ್ದಾರೆ.

ಹೊಸದುರ್ಗ ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಖನಿಜ ನಿಗಮದಿಂದ ಸ್ಥಾಪಿಸಲಾದ ಹೈಮಾಸ್ಟ್ ದೀಪ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದಿಂದ ಹೊಸ ಮರಳು ನೀತಿ ಅನುಷ್ಠಾನಗೊಳಿಸಲಿದ್ದು, ಕಡಿಮೆ ವೆಚ್ಚದ ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ನೀಡಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ನಿಗಮದಿಂದ ಅನುದಾನ ಒದಗಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...