alex Certify ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಹೈಕೋರ್ಟ್ ಮಹತ್ವದ ತೀರ್ಪು -ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ತೆರಿಗೆ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಹೈಕೋರ್ಟ್ ಮಹತ್ವದ ತೀರ್ಪು -ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ತೆರಿಗೆ ರದ್ದು

ಬೆಂಗಳೂರು: ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ಅಂತರ ರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಣ್ಣ ಖನಿಜಗಳ ರಿಯಾಯಿತಿ ನಿಯಮ 42(7) ರದ್ದು ಮಾಡಲಾಗಿದೆ. ಕರ್ನಾಟಕ ರಾಜ್ಯ ಸಣ್ಣ ಖನಿಜಗಳ ರಿಯಾಯಿತಿ ನಿಯಮ ರದ್ದು ಮಾಡಲಾಗಿದ್ದು, ಜಲ್ಲಿ, ಕಲ್ಲು, ಎಂ ಸ್ಯಾಂಡ್ ಗೆ ಅಂತರರಾಜ್ಯ ತೆರಿಗೆಯನ್ನು ರದ್ದು ಮಾಡಲಾಗಿದೆ.

ಬೇರೆ ರಾಜ್ಯಗಳ ಜಲ್ಲಿ, ಕಲ್ಲು, ಎಂ. ಸ್ಯಾಂಡ್ ಗೆ ಟನ್ ಗೆ 70 ರೂ.ನಂತೆ ಸರ್ಕಾರಕ್ಕೆ ತೆರಿಗೆ ನೀಡಬೇಕಿತ್ತು. 2020 ರ ಜೂನ್ 30 ರಂದು ಈ ಬಗ್ಗೆ ಸರ್ಕಾರ ತಿದ್ದುಪಡಿ ತಂದಿತ್ತು. ತೆರಿಗೆ ಪ್ರಶ್ನಿಸಿ ಕೆಲವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಕಾನೂನಿನಡಿ ತೆಗೆದ ಖನಿಜಕ್ಕೆ ಅಂತಾರಾಜ್ಯ ತೆರಿಗೆ ಇಲ್ಲ. ಸರ್ಕಾರ ತೆರಿಗೆ ನಿರ್ಧರಿಸುವ ಅಧಿಕಾರ ಇಲ್ಲವೆಂದು ಹೈಕೋರ್ಟ್ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ತೀರ್ಪು ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...