alex Certify ಮನೆ ಕಟ್ಟುವ ಬಡವರಿಗೆ ಗುಡ್ ನ್ಯೂಸ್, ಮರಳು ಉಚಿತ; ಕೈಗೆಟುಕುವ ದರದಲ್ಲಿ 50 ಕೆಜಿ ಚೀಲದಲ್ಲೂ ಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕಟ್ಟುವ ಬಡವರಿಗೆ ಗುಡ್ ನ್ಯೂಸ್, ಮರಳು ಉಚಿತ; ಕೈಗೆಟುಕುವ ದರದಲ್ಲಿ 50 ಕೆಜಿ ಚೀಲದಲ್ಲೂ ಲಭ್ಯ

ಬೆಂಗಳೂರು: ಮನೆ ಕಟ್ಟುವವರಿಗೆ ಮರಳಿನ ಕೊರತೆ ಬಹುದೊಡ್ಡ ಸಮಸ್ಯೆಯಾಗಿದ್ದು, ಇದನ್ನು ನಿವಾರಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಅವರು, ಬ್ಯಾಗ್ ಗಳಲ್ಲಿ 50 ಕೆಜಿ ಮರಳು ಮಾರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ ನಂತರ ಮಾತನಾಡಿದ ಸಚಿವರು, ಮನೆ, ಕಟ್ಟಡ ನಿರ್ಮಿಸುವವರಿಗೆ ಕೈಗೆಟಕುವ ದರದಲ್ಲಿ ಮರಳು ಸಿಗುವಂತೆ ಮಾಡಲು ಯೋಜನೆ ಜಾರಿಗೆ ತರಲಾಗುತ್ತಿದೆ. 50 ಕೆಜಿ ಚೀಲಗಳಲ್ಲಿ ಮರಳು ಮಾರಾಟ ಮಾಡಲಾಗುವುದು. ಅದಕ್ಕಿಂತ ಹೆಚ್ಚಿನ ಪ್ರಮಾಣದ ಮರಳನ್ನು ಬೇಕಾದರೂ ಖರೀದಿಸಬಹುದಾಗಿದೆ ಎಂದು ಹೇಳಿದ್ದಾರೆ.

ಪ್ರಾಯೋಗಿಕವಾಗಿ ರಾಜ್ಯದ ಐದು ಸ್ಥಳಗಳಲ್ಲಿ ಮರಳು ಮಾರಾಟಕ್ಕೆ ಘಟಕಗಳನ್ನು ಸ್ಥಾಪಿಸಲಾಗುವುದು. ಚೀಲಗಳಲ್ಲಿ ಮರಳು ತುಂಬಿಸಿ ಸಾಗಣೆ ಮಾಡಿ ಮಾರಾಟ ಮಾಡಲು ಎ.ಬಿ.ಸಿ. ಶ್ರೇಣಿಯಾಗಿ ವರ್ಗೀಕರಿಸಲಾಗುವುದು. ಸಾಗಣೆಯ ಸಂದರ್ಭದಲ್ಲಿ ಮರಳು ಶೇಕಡ 25 -30 ರಷ್ಟು ಮರಳು ಅನುಪಯುಕ್ತವಾಗುತ್ತಿರುವುದನ್ನು ತಡೆಯಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

5 ಲಕ್ಷ ರೂಪಾಯಿಗಿಂತ ಕಡಿಮೆ ಮೊತ್ತದ ಮನೆ ನಿರ್ಮಿಸುವವರಿಗೆ ಯಾವುದೇ ರಾಜಧನ ಪಡೆಯುವುದಿಲ್ಲ. ಬಡತನ ರೇಖೆಗಿಂತ ಕೆಳಗಿನವರು, ಬಡವರು ಗ್ರಾ.ಪಂ. ವ್ಯಾಪ್ತಿಯಲ್ಲಿ ಆಶ್ರಯ ಮನೆ ನಿರ್ಮಿಸುವವರಿಗೆ ಉಚಿತವಾಗಿ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...