alex Certify ತಡರಾತ್ರಿ ಶ್ರೀಗಂಧ ಮರ ಕದಿಯಲು ಹೋದ ಕಳ್ಳ ಗುಂಡೇಟಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಶ್ರೀಗಂಧ ಮರ ಕದಿಯಲು ಹೋದ ಕಳ್ಳ ಗುಂಡೇಟಿಗೆ ಬಲಿ

ಬೆಂಗಳೂರು: ಶ್ರೀಗಂಧ ಮರ ಕಡಿಯಲು ಬಂದ ಕಳ್ಳನ ಮೇಲೆ ಫೈರಿಂಗ್ ಮಾಡಿದ್ದು, ಗುಂಡಿನ ದಾಳಿಯಿಂದ ಗಂಧದ ಚೋರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಬಳಿ ಘಟನೆ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಯಲ್ಲಿ ಓರ್ವ ಕಳ್ಳ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ.

ಮೃತ ಕಳ್ಳ ಕೋಲಾರ ಜಿಲ್ಲೆ ಮಾಲೂರು ಮೂಲದ ನಿವಾಸಿಯಾಗಿದ್ದಾನೆ. ಬನ್ನೇರುಘಟ್ಟ ಅರಣ್ಯದಲ್ಲಿ ಹಲವು ದಿನಗಳಿಂದ ಶ್ರೀಗಂಧ ಮರಗಳು ಕಳುವಾಗಿದ್ದವು. ಅರಣ್ಯದಲ್ಲಿ ಫಾರೆಸ್ಟ್ ಬೀಟ್ ಸಿಬ್ಬಂದಿ ನಿಯೋಜಿಸಲಾಗಿತ್ತು. ರಾತ್ರಿ ಒಂದು ಗಂಟೆಯಲ್ಲಿ ಕಳ್ಳರು ಗಂಧದ ಮರ ಕಳ್ಳತನಕ್ಕೆ ಬಂದಿದ್ದಾರೆ.

ಮರ ಕಡಿಯುವ ಶಬ್ದ ಕೇಳಿದ ಸಿಬ್ಬಂದಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಅರಣ್ಯ ಸಿಬ್ಬಂದಿ ಎಚ್ಚರಿಕೆಗೂ ಲೆಕ್ಕಿಸದೆ ಕಳ್ಳರು ಪರಾರಿಗೆ ಯತ್ನಿಸಿದ್ದು, ಈ ವೇಳೆ ಫೈರಿಂಗ್ ಮಾಡಲಾಗಿದೆ. ಗುಂಡಿನ ದಾಳಿಯಿಂದ ಸ್ಥಳದಲ್ಲೇ ಶ್ರೀಗಂಧ ಮರ ಕಳ್ಳ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...