alex Certify ಉಚಿತ ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ನೂಕುನುಗ್ಗಲಲ್ಲಿ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಚಿತ ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ನೂಕುನುಗ್ಗಲಲ್ಲಿ ಪರದಾಟ

ಹಾಸನ: ಹಾಸನ ಜಿಲ್ಲೆ ಅರಕಲಗೂಡಿನಲ್ಲಿ ವಿಶ್ವ ತಾಯಂದಿರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೀರೆ ವಿತರಿಸಲಾಗಿದ್ದು, ಸೀರೆ ಪಡೆಯಲು ಸಾವಿರಾರು ಮಹಿಳೆಯರು ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿದೆ.

ಮಾಜಿ ಪೊಲೀಸ್ ಅಧಿಕಾರಿ ಶ್ರೀಧರ್ ಗೌಡ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಧೃವನಾರಾಯಣ, ಮಾಜಿ ಸಚಿವೆ ಉಮಾಶ್ರೀ, ನಟಿಯರಾದ ಶಾನ್ವಿ ಶ್ರೀವಾತ್ಸವ್, ಮಿಲನಾ ನಾಗರಾಜ್ ಹಾಗೂ ನಟ ಸಾಧು ಕೋಕಿಲ ಮೊದಲಾದವರು ಭಾಗವಹಿಸಿದ್ದರು.

ಐದು ಸಾವಿರಕ್ಕೂ ಅಧಿಕ ಮಹಿಳೆಯರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಎಲ್ಲರಿಗೂ ಬಾಗಿನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ಮುಗಿದ ನಂತರ ಸೀರೆ ವಿತರಣೆಗೆ ಮುಂದಾಗುತ್ತಿದ್ದಂತೆ ಮಹಿಳೆಯರು ಮುಗಿಬಿದ್ದರು. ಸೀರೆ ಪಡೆಯಲು ಮಹಿಳೆಯರು ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...