alex Certify BIG BREAKING NEWS: 4 ವರ್ಷದ ನಂತರ ಅಚ್ಚರಿ ಹೇಳಿಕೆ ನೀಡಿದ ಶಶಿಕಲಾ ನಟರಾಜನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: 4 ವರ್ಷದ ನಂತರ ಅಚ್ಚರಿ ಹೇಳಿಕೆ ನೀಡಿದ ಶಶಿಕಲಾ ನಟರಾಜನ್

ಚೆನ್ನೈ: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ತಮಿಳುನಾಡಿಗೆ ಎಂಟ್ರಿ ಕೊಟ್ಟಿದ್ದು, ಅದ್ಧೂರಿ ಸ್ವಾಗತ ನೀಡಲಾಗಿದೆ.

ನಾನು ಖಂಡಿತವಾಗಿಯೂ ರಾಜಕೀಯಕ್ಕೆ ಬಂದೇ ಬರುತ್ತೇನೆ ಎಂದು ವಿ.ಕೆ. ಶಶಿಕಲಾ ನಟರಾಜನ್ ಹೇಳಿದ್ದಾರೆ. ನಾಲ್ಕು ವರ್ಷಗಳ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಜಯಲಲಿತಾ ಸಮಾಧಿ ಏಕೆ ಮುಚ್ಚಿದ್ದಾರೆ ಎಂದು ಜನರಿಗೆ ಗೊತ್ತಿದೆ. ನಿಮ್ಮ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ತಲೆಬಾಗುತ್ತೇನೆ. ಎಲ್ಲರನ್ನೂ ಭೇಟಿಯಾಗಿ ಚರ್ಚಿಸಿ ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿದ್ದ ಶಶಿಕಲಾ ಕಳೆದ ವಾರವೇ ಬಿಡುಗಡೆಯಾಗಿದ್ದರೂ, ಇಂದು ತಮಿಳುನಾಡಿಗೆ ಪ್ರವೇಶಿಸಿದ್ದಾರೆ. ಶಶಿಕಲಾ ಅವರಲ್ಲಿ ಜಯಲಲಿತಾರನ್ನು ಕಾಣುತ್ತಿರುವ ಅಭಿಮಾನಿಗಳು, ಬೆಂಬಲಿಗರ ಸಂಭ್ರಮ ಮುಗಿಲುಮುಟ್ಟಿದೆ. ಶಶಿಕಲಾ ರಾಜಕೀಯಕ್ಕೆ ಬಂದರೂ ಸದ್ಯಕ್ಕೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...