alex Certify ಸತೀಶ್ ಜಾರಕಿಹೊಳಿ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತೀಶ್ ಜಾರಕಿಹೊಳಿ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಶಿವಮೊಗ್ಗ: ಹಿಂದೂ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ನೆಲದಲ್ಲಿ ಹುಟ್ಟಿ ಈ ರೀತಿ ಹೇಳಿಕೆ ನೀಡಿದ್ದು ಖಂಡನಿಯ ಎಂದು ತಿಳಿಸಿದ್ದಾರೆ.

ಚುನಾವಣೆಯಲ್ಲಿ ಮತದಾರರು ಸತೀಶ್ ಜಾರಕಿಹೊಳಿ ಅವರಿಗೆ ತಕ್ಕ ಉತ್ತರ ನೀಡಬೇಕು. ಹಿಂದುತ್ವ, ಧರ್ಮ, ಕನ್ನಡದ ಬಗ್ಗೆ ವಿರೋಧಿ ಹೇಳಿಕೆಗಳನ್ನು ಬಿಜೆಪಿ ಖಂಡಿಸುತ್ತದೆ. ಇದರ ವಿರುದ್ಧ ರಾಜ್ಯಾದಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ. ಕಾಂಗ್ರೆಸ್ ನಾಯಕರು ಕೂಡ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಖಂಡಿಸಬೇಕು. ಇಲ್ಲದಿದ್ದರೆ ಅವರ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಂಡಂತೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಸತೀಶ್ ಹೇಳಿಕೆಯ ಬಿಸಿ ತಟ್ಟುತ್ತದೆ ಎಂದು ಹೇಳಿದ್ದಾರೆ.

ಕೂಡಲೇ ಕಾಂಗ್ರೆಸ್ ಪಕ್ಷ ಎಚ್ಚೆತ್ತುಕೊಂಡು ಸತೀಶ್ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ. ಧೈರ್ಯವಾಗಿ ಮೂರ್ಖತನದ ಹೇಳಿಕೆ ನೀಡಿರುವುದಕ್ಕೆ ಭಾರತೀಯರ ಸ್ವಾಭಿಮಾನಕ್ಕೆ ಘಾಸಿಯಾಗಿದೆ. ಈ ರೀತಿ ಹೇಳಿಕೆ ಯಾರಿಗೂ ಶೋಭೆ ತರುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...