alex Certify ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರೂ ಒತ್ತಡ ಹೇರಿಲ್ಲ, ಪಕ್ಷದ ಅಭ್ಯರ್ಥಿ ಸೋತರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತೆ ಎಂಬುದು ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಯಾರೂ ಒತ್ತಡ ಹೇರಿಲ್ಲ, ಪಕ್ಷದ ಅಭ್ಯರ್ಥಿ ಸೋತರೆ ಸಚಿವ ಸ್ಥಾನಕ್ಕೆ ಕುತ್ತು ಬರುತ್ತೆ ಎಂಬುದು ಸುಳ್ಳು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋತರೆ ನಮ್ಮ ಸಚಿವ ಸ್ಥಾನಕ್ಕೆ ಕುತ್ತು ಬರುತ್ತದೆ ಎನ್ನುವುದು ಬರಿ ಸುಳ್ಳು. ಇಂತಹ ಮಾತುಗಳನ್ನು ಯಾರೂ ಹೇಳಿಲ್ಲ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯಲ್ಲಿಯೂ ಈ ಕುರಿತಾಗಿ ಯಾವುದೇ ಚರ್ಚೆ ನಡೆದಿಲ್ಲ. ಹೆಚ್ಚು ಸ್ಥಾನ ಗೆಲ್ಲಿಸುವ ನಿಟ್ಟಿನಲ್ಲಿ ಸಚಿವರು ಶ್ರಮಿಸಬೇಕು ಎಂಬುದು ನಿಜ ಎಂದು ಹೇಳಿದ್ದಾರೆ.

ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲಬೇಕೆಂಬ ಹಂಬಲವಿದೆ. ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲು ಶ್ರಮ ಪಡುತ್ತೇವೆ. ಅಭ್ಯರ್ಥಿಗಳ ಪ್ರಾಥಮಿಕ ಪಟ್ಟಿ ಸಿದ್ದಪಡಿಸಿ ಹೈಕಮಾಂಡ್ ಗೆ ಕಳಿಸುತ್ತೇವೆ. ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ. ಆಂತರಿಕ ಸಮೀಕ್ಷೆ ಆಧರಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...