alex Certify ಆಡಳಿತ, ಪ್ರತಿಪಕ್ಷಗಳ ನಡುವೆ ಮತ್ತೆ ಕದನಕ್ಕೆ ಕಾರಣವಾಗಲಿದೆಯಾ ಸುವರ್ಣಸೌಧದಲ್ಲಿ ಸಾವರ್ಕರ್ ಚಿತ್ರ ಅಳವಡಿಕೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಡಳಿತ, ಪ್ರತಿಪಕ್ಷಗಳ ನಡುವೆ ಮತ್ತೆ ಕದನಕ್ಕೆ ಕಾರಣವಾಗಲಿದೆಯಾ ಸುವರ್ಣಸೌಧದಲ್ಲಿ ಸಾವರ್ಕರ್ ಚಿತ್ರ ಅಳವಡಿಕೆ…?

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ವೀರ ಸಾವರ್ಕರ್ ಸೇರಿದಂತೆ 7 ನಾಯಕರ ಭಾವಚಿತ್ರಗಳನ್ನು ಸುವರ್ಣ ಸೌಧದ ವಿಧಾನಸಭೆಯಲ್ಲಿ ಅಳವಡಿಸಲು ಸ್ಪೀಕರ್ ಸಚಿವಾಲಯ ಸಿದ್ಧತೆ ಮಾಡಿಕೊಂಡಿದೆ.

ಈ ವಿಚಾರ ಆಡಳಿತ ಮತ್ತು ಪ್ರತಿಪಕ್ಷ ನಾಯಕರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ. ಗಾಂಧೀಜಿ, ಅಂಬೇಡ್ಕರ್. ಸಾವರ್ಕರ್ ಸೇರಿದಂತೆ ಹಲವು ಮಹನೀಯರ ಫೋಟೋಗಳನ್ನು ಅನಾವರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂದು ಅಧಿವೇಶನದಲ್ಲಿ ಈ ಬಗ್ಗೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...