alex Certify ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಚ ಜನಾಂಗ ಕೈ ಬಿಡಲ್ಲ: ಎ. ನಾರಾಯಣಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ, ಕೊರಚ ಜನಾಂಗ ಕೈ ಬಿಡಲ್ಲ: ಎ. ನಾರಾಯಣಸ್ವಾಮಿ

ಹೊಸಪೇಟೆ: ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಿಂದ ಲಂಬಾಣಿ, ಭೋವಿ ಜನಾಂಗ ಕೈ ಬಿಡುವುದಿಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಭೋವಿ ಲಂಬಾಣಿ, ಕೊರಮ, ಕೊರಚ ಜನಾಂಗಗಳನ್ನು ಯಾವುದೇ ಕಾರಣಕ್ಕೂ ಪರಿಶಿಷ್ಟ ಜಾತಿ ಮೀಸಲಾತಿ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದರು.

ಸದಾಶಿವ ಆಯೋಗ ವರದಿ ಅನುಷ್ಠಾನದ ಬಗ್ಗೆ ರಚಿಸಿದ ಮಾಧುಸ್ವಾಮಿ ನೇತೃತ್ವದ ಉಪಸಮಿತಿಯಿಂದ ಚುನಾವಣೆ ಪೂರ್ವದಲ್ಲೇ ವರದಿ ಪಡೆದು ಕೇಂದ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶಿಫಾರಸು ಮಾಡಲಿದ್ದಾರೆ. ಒಳ ಮೀಸಲಾತಿ ವರ್ಗೀಕರಣದ ನಂತರ ಜಾರಿಯಾಗುವ ಹೊಸ ನೀತಿಯಲ್ಲಿ ಎಡಗೈ ಬಲಗೈ ಅಲೆಮಾರಿಗಳಿಗೆ ನ್ಯಾಯ ಸಿಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...