alex Certify ಪರಿಶಿಷ್ಟ ಜಾತಿ-ಪಂಗಡದ ಬಡವರಿಗೆ ಸಿಎಂ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ಜಾತಿ-ಪಂಗಡದ ಬಡವರಿಗೆ ಸಿಎಂ ಸಿಹಿಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಬಡವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ ಅವರ 115 ನೇ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಪರಿಶಿಷ್ಟ ಸಮುದಾಯಕ್ಕೆ ವಸತಿ ಯೋಜನೆಯಡಿ ಮನೆ ನಿರ್ಮಿಸಲು ನೀಡುತ್ತಿದ್ದ ಸಬ್ಸಿಡಿಯನ್ನು 1.75 ಲಕ್ಷದಿಂದ 2 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಭೂಒಡೆತನ ಹೊಂದಿದವರಿಗೆ ಸಾಮಾಜಿಕ ಗೌರವ ದೊರೆಯುತ್ತದೆ. ಸಮುದಾಯದವರಿಗೆ ಭೂಒಡೆತನಕ್ಕೆ ಸಂಬಂಧಿಸಿದಂತೆ ಭೂಸುಧಾರಣಾ ಕಾಯ್ದೆ ಜಾರಿ ಮಾಡಲಾಗಿದ್ದು, ಭೂಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...