alex Certify ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.in ಮೂಲಕ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ನಂತರ ಅರ್ಜಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲಾತಿಗಳನ್ನು ದೃಢೀಕರಿಸಿ, ಲಗತ್ತಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ, ಧಾರವಾಡ ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ಅಥವಾ ದೂರವಾಣಿ 0836-2447201 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...