alex Certify ಎಲ್ಲಾ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದಸರಾ ಮುಗಿದ ನಂತ್ರ ಬಿಸಿಯೂಟ, 1 ರಿಂದ 5 ನೇ ತರಗತಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ದಸರಾ ಮುಗಿದ ನಂತ್ರ ಬಿಸಿಯೂಟ, 1 ರಿಂದ 5 ನೇ ತರಗತಿ ಆರಂಭ

ಉಡುಪಿ: ಕೋವಿಡ್ ನಡೆವೆಯೂ ರಾಜ್ಯದಲ್ಲಿ ಆರನೇ ತರಗತಿ ಮೇಲ್ಪಟ್ಟು ಶಾಲೆ-ಕಾಲೇಜುಗಳನ್ನು ಆರಂಭಿಸಿದ ಸರ್ಕಾರ ಸೈ ಎನಿಸಿಕೊಂಡಿದೆ.

ದಸರಾ ಮುಗಿದ ನಂತರ ಒಂದರಿಂದ ಐದನೇ ತರಗತಿಗಳನ್ನು ಕೂಡ ಆರಂಭಿಸಲಾಗುವುದು ಎಂದು ಉಡುಪಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳನ್ನು ಆರಂಭಿಸಲು ಒಪ್ಪಿಗೆ ನೀಡಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಸಿಎಂ ಟಾಸ್ಕ್ ಫೋರ್ಸ್ ಸಭೆ ನಡೆಸಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಸಿಎಂ ಆಸಕ್ತಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ದಸರಾ ಮುಗಿದ ನಂತರ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲಾಗುತ್ತದೆ. ಎಲ್ಲರಿಗೂ ಶಾಲೆಗೆ ಬರುವುದು ಕಡ್ಡಾಯವಲ್ಲ. ಆನ್ಲೈನ್ ಮತ್ತು ಆಫ್ ಲೈನ್ ನಲ್ಲಿ ತರಗತಿ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...