alex Certify ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿಯೇ ಚಾಲಕನಿಗೆ ಹೃದಯಾಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಶಾಲಾ ಬಸ್ ನಲ್ಲಿಯೇ ಚಾಲಕನಿಗೆ ಹೃದಯಾಘಾತ

ಉಡುಪಿ: ಶಾಲಾ ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿದ್ದು, ಆದರೂ ತಕ್ಷಣ ಸಮಯ ಪ್ರಜ್ಞೆ ಮೆರೆದ ಚಾಲಕ ಮಕ್ಕಳನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಪೆರಂಪಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಬ್ರಹ್ಮಾವರದ ಖಾಸಗಿ ಶಾಲೆಯ ಸುಮಾರು 60 ಮಕ್ಕಳನ್ನು ಕರೆದಿಯ್ಯುತ್ತಿದ್ದ ಬಸ್ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿಯಲ್ಲಿ ಐವರು ಮಕ್ಕ್ಳನ್ನು ಇಳಿಸಿದ ಬಸ್, ಪೆರಂಪಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಅಲ್ವಿನ್ ಡಿಸೋಜಾಗೆ ಲಘು ಹೃದಯಾಘಾತವಾಗಿದೆ.

ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆ ಬದಿಯ ಚರಂಡಿ ಬಳಿ ನಿಲ್ಲಿಸಿದ್ದಾರೆ.ತೀವ್ರವಾಗಿ ಅಸ್ವಸ್ಥಗೊಂಡ ಚಾಲಕನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮಣಿಪಾಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...