alex Certify BIG NEWS: ಕುಡಿದ ಮತ್ತಲ್ಲಿ ಶಾಲಾ ವಾಹನ ಚಾಲನೆ; ಪಾದಚಾರಿ ಮೇಲೆ ಹರಿದ ಸ್ಕೂಲ್ ಬಸ್; ವ್ಯಕ್ತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕುಡಿದ ಮತ್ತಲ್ಲಿ ಶಾಲಾ ವಾಹನ ಚಾಲನೆ; ಪಾದಚಾರಿ ಮೇಲೆ ಹರಿದ ಸ್ಕೂಲ್ ಬಸ್; ವ್ಯಕ್ತಿ ದುರ್ಮರಣ

ಬೆಂಗಳೂರು: ಕಂಠಪೂರ್ತಿ ಕುಡಿದು ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಡ್ರೈವರ್ ಬೇಜವಾಬ್ದಾರಿಗೆ ವ್ಯಕ್ತಿಯೋರ್ವ ಬಲಿಯಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕುಡಿದ ಅಮಲಿನಲ್ಲಿಯೇ 25 ಶಾಲಾ ಮಕ್ಕಳನ್ನು ಕೂರಿಸಿಕೊಂಡು ಸ್ಕೂಲ್ ಬಸ್ ಚಲಾಯಿಸುತ್ತಿದ್ದ ಚಾಲಕ, ಮೆಡಿಕಲ್ ಶಾಪ್ ನಿಂದ ಔಷಧಿ ಖರೀದಿಸಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದಿದ್ದಾರೆ. ಸ್ಥಳದಲ್ಲೇ ಕುಸಿದುಬಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಆಂಜನಪ್ಪ ಮೃತ ವ್ಯಕ್ತಿ. ಅಪಘಾತದಲ್ಲಿ ಸ್ಕೂಲ್ ಬಸ್ ಇನ್ನೋರ್ವ ಮಹಿಳೆಗೂ ಡಿಕ್ಕಿ ಹೊಡೆದಿದ್ದು, ಅವರು ಕೂಡ ಗಾಯಗೊಂಡಿದ್ದಾರೆ.

ಅಕ್ಟೋಬರ್ 10ರಂದು ದೊಡ್ಡಬಾಣಸವಾಡಿಯಲ್ಲಿ ಈ ದುರಂತ ಸಂಭವಿಸಿದೆ. ಸ್ಕೂಲ್ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...