alex Certify BIG NEWS: ರಾಜ್ಯದಲ್ಲಿ ಶಾಲೆ ಆರಂಭ ಕುರಿತಾಗಿ ಸೋಮವಾರ ನಿರ್ಧಾರ, ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಶಾಲೆ ಆರಂಭ ಕುರಿತಾಗಿ ಸೋಮವಾರ ನಿರ್ಧಾರ, ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ.

ವಿಧಾನಸೌಧದಲ್ಲಿ ಸೋಮವಾರ ಮಧ್ಯಾಹ್ನ 12.30 ಕ್ಕೆ ಸಭೆ ನಡೆಯಲಿದೆ. ಶಿಕ್ಷಣ ಸಚಿವರು, ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಲಾಗಿದೆ.

ಕೊರೋನಾ ಕಡಿಮೆಯಾಗುತ್ತಿದ್ದು, ಇದೇ ವೇಳೆ 2 ನೇ ಅಲೆ ಆತಂಕವೂ ಇದೆ. ಇಂತಹ ಸಂದರ್ಭದಲ್ಲಿ ಸುರಕ್ಷತೆ ಕ್ರಮ, ಮಾರ್ಗಸೂಚಿಯೊಂದಿಗೆ ಕಾಲೇಜ್ ಗಳನ್ನು ಆರಂಭಿಸಲಾಗಿದ್ದು, ಅದೇ ರೀತಿ ಮಾರ್ಗಸೂಚಿಗಳೊಂದಿಗೆ ಶಾಲೆಗಳನ್ನು ಆರಂಭಿಸಬೇಕೆ? ಬೇಡವೇ ಎಂಬುದರ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...